ಸೋಮವಾರ, ನವೆಂಬರ್ 30, 2009

ಬರತೇಶನ ವಚನಗಳು

ಅರಿವು
-----
ಅರಿವೇ ಗುರುವೆಂದರು ಶರಣರು
ತನ್ನರಿವಿಲ್ಲದೆ ನಿನ್ನರಿವಿಲ್ಲದೆ
ಬಾಳಹೊಳೆ ಹರಿಯಬಲ್ಲುದೇ ಹೇಳು ಬರತೇಶ


ಅರಿವೊಳಗೆ ಸುಳಿವನ್ನಿತ್ತು
ಪರಿವೇ ಇಲ್ಲದೆ ಪರದಾಡಿಸಿ
ಮತ್ತದೆ ನಿಲುವುಗಳನ್ನು ಎಡತಾಕಿಸಿ
ಮೊತ್ತ ಸೊನ್ನೆಯಾಯಿತಲ್ಲೊ ಬರತೇಶ

ಉಂಕು
-----
ಉಂಕಿಸಿದೇ ಇರಲಾರೆ
ಅಂಕು-ಡೊಂಕುಗಳು ತಿದ್ದಲಾರೆ
ಉಂಕು,ಡೊಂಕುಗಳ ನಡುವಿನ
ಸೋಂಕಿಗೆ ಸಿಕ್ಕಿಕೊಂಡೆ ಕಾಣಾ ಬರತೇಶ

ಶನಿವಾರ, ನವೆಂಬರ್ 07, 2009

ತೊರೆದು ನೀ...

ತೊರೆದು ನೀ ಹೋಗದಿರು
ಬರಡೆನ್ನ ಒಡಲು ನೀನಿಲ್ಲದೆ
ಬದುಕ ತುದಿ ಕೂಡಲೆ ಮುಟ್ಟುವೆನು
ತದುಕಬೇಡ ಹೀಗೆ ನಿನ್ನ ಎದೆಗೂಡಿಂದ

ಹಲವು ಅಡತಡೆಗಳನ್ನು ದಾಟಿ
ಒಲಿಸಿ ನಿನ್ನ